ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕೈನಡು ಬಳಿ ಟ್ಯಾಂಕರ್ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ 3 ಮಂದಿ ದುರ್ಮರಣ ಹೊಂದಿದ ಘಟನೆ ನಡೆದಿದೆ. ಮೃತರನ್ನು ಬೈಕ್ ಸವಾರರಾದ ಮಲ್ಲಿಕಾರ್ಜುನ್, ವಿಜಯ್, ಮತ್ತು ವೀರಪ್ಪ ಎಂದು ಗುರುತಿಸಲಾಗಿದೆ. ಮೂರು ಜನರು ಕೂಡ ಕೈ ನಡು ಗ್ರಾಮದವರಾಗಿದ್ದಾರೆ. ಟ್ಯಾಂಕರ್ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಾಂಪುರ ಸಿಪಿಐ ಶ್ರೀಧರ್ ಶಾಸ್ತ್ರಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ