ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಘಟನೆ ನಡೆದಿದೆ.
ಸ್ನೇಹಿತೆರೊಂದಿಗೆ ಬಾವಿಯಲ್ಲಿ ಈಜುತ್ತಿರುವಾಗ ಆಕಸ್ಮಿಕವಾಗಿ ಮಾರುತಿ (14) ಮೃತಪಟ್ಟ ಬಾಲಕ ದುರ್ದೈವಿಯಾಗಿದ್ದಾನೆ. ಮೃತ ದುರ್ದೈವಿಯನ್ನು
ಮೊಳಕಾಲ್ಮೂರು ತಾಲೂಕಿನ ಮೆಗಳ ಕಣಿವೆ ಗ್ರಾಮದ ಬಾಲಕ ಎಂದು ಗುರುತಿಸಲಾಗಿದೆ.
ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.