ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯದಲ್ಲಿ ನೇಹ, ಅಂಜಲಿ ಹಾಗೂ ಚಿತ್ರದುರ್ಗದಲ್ಲಿ ರೇಣುಕಸ್ವಾಮಿ ಕೊಲೆ ನಡೆದಿದೆ. ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ರೇಣುಕಾ ಸ್ವಾಮಿ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಬೆಂಗಳೂರಿನಲ್ಲಿ ಹೊಸಬರ ಚಲನವಲನ ಗಮನಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಶೆಡ್ನಲ್ಲಿಟ್ಟು ಕೊಲೆ ಮಾಡಿದರೂ ಸಹ ಗೊತ್ತಾಗಿಲ್ಲ. ಸರ್ಕಾರ ಜೀವಂತವಾಗಿ ಇಲ್ಲ ಅನ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು, ಸ್ಥಳೀಯ ಶಾಸಕರು ವಾರದ ನಂತರ ಕಾಟಾಚಾರಕ್ಕೆ ಬಂದು ಹೋಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಇತ್ತ ಕಾಲಿಟ್ಟಿಲ್ಲ. ಇದೀಗ ಗೃಹ ಸಚಿವರ ಬಾಲ ಹಿಡಿದುಕೊಂಡು ಬರುತ್ತಾರಾ’ ಎಂದ ಪ್ರಶ್ನಿಸಿದರು.