ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ತಾಕೀತು

ರಾಜ್ಯ

ತುರವನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಲೇಜು ನಿರ್ಮಾಣವಾಗುತ್ತಿರುವ ಸ್ಥಳದ ಬಗ್ಗೆ ಭೂ ವಿವಾದಗಳು ಕೇಳಿ ಬಂದಿದ್ದರಿಂದ ಜಿಲ್ಲಾಧಿಕಾರಿ ಖುದ್ದು ಸ್ಥಳ ಪರಿಶೀಲನೆ ಮಾಡಿ ತಹಶೀಲ್ದಾರ್ ಡಾ.ನಾಗವೇಣಿ ಅವರಿಂದ ಮಾಹಿತಿ ಪಡೆದುಕೊಂಡರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಅವರು ಕಾಲ ಮಿತಿಯಲ್ಲಿ ಉತ್ತಮ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

 

 

Leave a Reply

Your email address will not be published. Required fields are marked *