ರೂ.2.90 ಕೋಟಿ ವೆಚ್ಚದಲ್ಲಿ ಭೀಮಸಮುದ್ರ ಪಿಹೆಚ್‍ಸಿ ಕಟ್ಟಡ ಕಾಮಗಾರಿಗೆ  ಗುದ್ದಲಿ ಪೂಜೆ

ರಾಜ್ಯ

ರೂ.2.90 ಕೋಟಿ ವೆಚ್ಚದಲ್ಲಿ ಭೀಮಸಮುದ್ರ ಪಿಹೆಚ್‍ಸಿ ಕಟ್ಟಡ ಕಾಮಗಾರಿಗೆ  ಗುದ್ದಲಿ ಪೂಜೆ

 

 

ಚಿತ್ರದುರ್ಗದ ಭೀಮಸಮುದ್ರ ಗ್ರಾಮದಲ್ಲಿ ಶುಕ್ರವಾರ ಸಂಸದ ಗೋವಿಂದ ಎಂ ಕಾರಜೋಳ ಹಾಗೂ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕೆ.ಎಂ.ಇ.ಆರ್.ಸಿ ಅನುದಾನದಡಿ ರೂ.2.90 ಕೋಟಿ ವೆಚ್ಚದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಹಾಗೂ ತಲಾ ರೂ.75 ಲಕ್ಷ ವೆಚ್ಚದಲ್ಲಿ ಎರಡು ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಗೋವಿಂದ ಎಂ. ಕಾರಜೋಳ, ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳು ಬೇಗ ಪೂರ್ಣಗೊಂಡು ಸಾರ್ವಜನಿಕರಿಗೆ ಇದರ ಲಾಭ ದೊರಕುವಂತಾಗಬೇಕು ಎಂದರು.
ಇದೇ ವೇಳೆ ಗ್ರಾಮದಲ್ಲಿ ನೂತನ ಸಿ.ಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ದಾಪುರ, ಪಂಡರಹಳ್ಳಿ ಗ್ರಾಮಗಳಲ್ಲಿ ಕೂಡ ಕೆ.ಎಂ.ಇ.ಆರ್.ಸಿ ಅನುದಾನ ಅಡಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಮಾಡಲಾಗುತ್ತಿದೆ.
ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತಮ್ ಕಿನ್ ಬಾನು, ಹಿರೇಗುಂಟನೂರು ಗ್ರಾ.ಪಂ. ಅಧ್ಯಕ್ಷ ಸಿ.ರಾಧಮ್ಮ, ಭೀಮಸಮುದ್ರ ಗ್ರಾ.ಪಂ.ಅಧ್ಯಕ್ಷೆ ರಾಧಾ.ಆರ್, ಗೊಡಬನಹಾಳ್ ಗ್ರಾ.ಪಂ. ಅಧ್ಯಕ್ಷ ಮಧು ತಾ.ಪಂ. ಪ್ರಭಾರಿ ಇಓ ಚಂದ್ರಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಸೇರಿದಂತೆ ಇತರೆ ಜನಪ್ರತಿನಿಧಿಗಳು ಇದ್ದರು.

Leave a Reply

Your email address will not be published. Required fields are marked *