ಚಿತ್ರದುರ್ಗ: ಎಸ್ಸಿ ಕಾಲೋನಿಯಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಸುಮಾರು 11 ಕ್ಕೂ ಹೆಚ್ಚು ಗುಡಿಸಲುಗಳಿ ಭಸ್ಮವಾಗಿವೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ಎಸ್ಸಿ ಕಾಲೋನಿಯಲ್ಲಿರುವ ಗುಡಿಸಲಿನಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಗುಡಿಸಲಿನಲ್ಲಿದ್ದ ದವಸ ಧಾನ್ಯ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಕೂಡ ಬೆಂಕಿಗೆ ಸುಟ್ಟು ಕರಕಲಾಗಿವೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ವಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡಗಳಾಗುವುದನ್ನು ತಪ್ಪಿಸಿದ್ದಾರೆ.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ