ಬೆಂಗಳೂರು: ಕೋರೋನಾ ಮಹಾರಿಯಿಂದಾಗಿ 10 ತಿಂಗಳಿಂದ ಮುಚ್ಚಿದ್ದ ಶಾಲಾಕಾಲೇಜ್ ಗಳು ಜನವರಿ 1 ರಿಂದ ಪುರ್ನಾರಂಭವಾಗಲಿವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದು ಶಾಲಾ ಕಾಲೇಜುಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
10 ತಿಂಗಳಿಂದ ಶಾಲಾ ಕಾಲೇಜುಗಳು ಬಾಗಿಲಾಕಿದ್ದವು. ಇದೀಗ ರಾಜ್ಯದಲ್ಲಿ ಕೊರೋನಾ ಇಳಿಮುಖವಾಗುತ್ತಿದೆ ಎಂಬ ಅಭಿಪ್ರಾಯದೊಂದಿಗೆ ಸರ್ಕಾರ ಶಿಕ್ಷಣ ತಜ್ಞರ, ಶಿಕ್ಷಕರ ಸಲಹೆಯನ್ನು ಪಡೆದು ಶಾಲಾ ಕಾಲೇಜುಗಳ ಆರಂಭಕ್ಕೆ ಸೂಚನೆಯನ್ನು ನೀಡಿದೆ. ಮೊದಲ ಹಂತದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತದೆ. 6 ರಿಂದ 9 ರವೆರೆಗೆ ಮೂರು ದಿನಗಳು
ವಿದ್ಯಾಗಮ ತರಗತಿಯನ್ನು ಶಾಲಾ ಆವರಣದಲ್ಲಿ ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಸಂಯುಕ್ತವಾಣಿ