ಚಿತ್ರದುರ್ಗ: : ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಧಾನ ನೀಡಿ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಬಜೆಟ್ ಅಧಿವೇಶನದಲ್ಲಿ ಚಿತ್ರದುರ್ಗದ ಯಾವೊಬ್ಬ ಶಾಸಕರು ಭಾಗವಹಿಸುವುದಿಲ್ಲ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು ಎಂದು ನಾವೆಲ್ಲರೂ ಸತತ ಪ್ರಯತ್ನ ಮಾಡುತ್ತಿದ್ದೆವೆ. ಈ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಮನಬಂದಂತೆ ಮಾತನಾಡುತ್ತಿರುವುದು ಸರಿ ಅಲ್ಲ ಎಂದರು.
ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಸಾಕಷ್ಟು ಮಾನದಂಡಗಳು ಇವೆ. ಅದೇ ರೀತಿ ಮುಂದುವರೆಯಬೇಕು ಎಂದು ಹೇಳಿದ ಅವರು, ಮುಂದಿನ ವಾರ ಕೊರ್ ಕಮಿಟಿ ಸದಸ್ಯರು ಸೇರಿ ಸಿಎಂ ಅವರನ್ನು ಭೇಟಿ ಮಾಡಿ, ಇದನ್ನು ಮಂಜೂರು ಮಾಡಿಸಿಯೇ ಮಾಡಿಸುತ್ತೇವೆ ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭಾಗವಹಿಸಲಿದ್ದಾರೆ. ಇದಕ್ಕೆ ಸಿಎಂ ಒಪ್ಪದಿದ್ದಲ್ಲಿ ಬಜೆಟ್ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದರು.
ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಚಿವ ಶ್ರೀರಾಮುಲು, ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಪ್ರಾರಂಬಿಸಲು ಸರ್ಕಾರ ಬದ್ದವಿದೆ. ಈ ಭಾರಿಯ ಬಜೆಟ್ನಲ್ಲಿ ಯಡಿಯೂರಪ್ಪ ಅವರು ಸೇರಿಸಲಿದ್ದಾರೆ ಎಂದು ಹೇಳಿದರು.