BREAKING NEWS:
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಐವರು ಪೋಲಿಸರಿಗೆ ಗಂಭೀರ ಗಾಯ
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಬೆಂಗಾವಲು ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದು ಐವರು ಪೋಲಿಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಯಡಿಯೂರು ರಾಷ್ಟ್ರೀಯ ಹೆದ್ದಾರಿ 75 ರ ಬಳಿ ತಿಪ್ಫೋರು ಬಳಿ ನಡೆದಿದೆ..
ಬೆಂಗಾವಲು ವಾಹನದಲ್ಲಿದ್ದ ಮಹೇಶ್ ಮಂಜುನಾಥ್ ಅವರಿಗೆ ತೀವ್ರತರವಾದ ಗಂಭೀರ ಗಾಯಗಳಾಗಿದ್ದು, ಜಗದೀಶ್ ಹರೀಶ್ ಆನಂದ್ ಅವರುಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮಾಜಿಮುಖ್ಯ ಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಮಂಗಳೂರ ಬೆಳ್ಳಾರೆಯ ಪ್ರವೀಣ್ ಮತ್ತು ಸುರತ್ಕಲ್ ನ ಫಾಜಿಲ್ ನಿವಾಸಗಳಿಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಾಸ್ಸು ಬಂದಿದ್ದರು. ಇದೇ ವೇಳೆ ಅವರ ಬೆಂಗಾವಲು ಸಿಬ್ಬಂದಿ ಕರ್ತವ್ಯ ಮುಗಿಸಿ ವಾಪಾಸ್ಸು ಬೆಂಗಳೂರಿಗೆ ಹೋಗುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಗಾಯಾಗೊಂಡ ಸಿಬ್ಬಂದಿಗಳನ್ನು ಕೂಡಲೇ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಅಮೃತೂರು ವೃತ್ತ ನಿರೀಕ್ಷಕ ಅರುಣ್ ಸಾಲಂಕೆ ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ