ಮನೆ ಹಾನಿಗೊಳಗಾದ ಸಂತ್ರಸ್ತರಿಗೆ 5 ಲಕ್ಷ ಸರ್ಕಾರಿದಿಂದ 300 ಕೋಟಿ ಬಿಡುಗಡೆ

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ‌ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ರಾಜೀವ್ ಗಾ‌ಂಧಿ ವಸತಿ ನಿಗನದ ಮೂಲಕ ಪರಿಹಾರದ ಮೊತ್ತ 300 ಕೋಟಿ‌ ಬಿಡುಗಡೆ ಮಾಡಿದ್ದು, ಸಂತ್ರಸ್ತರ ಖಾತೆಗೆ ಜಮೆ ಮಾಡುವಂತೆ ಸೂಚನೆ ನೀಡಲಾಗಿದೆ.

 

 


ಮಳೆ ಪ್ರವಾಹದಿಂದ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ , ಬಹುತೇಕ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ, ಭಾಗಶಃ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ಪರಿಹಾರ ನೀಡಲಾಗುವುದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಾನಿಯಾಗಿದ್ದು, ಎನ್ ಡಿ ಆರ್ ಎಫ್ ಎಸ್ಡಿ ಆರ್ ಎಫ್ ಗಳ ಮಾರ್ಗ ಸೂಚಿಗಳ ಹೊರೆತಾಗಿಯೂ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ನೀಡಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸೂಚಿಸಲಾಗಿದೆ

Leave a Reply

Your email address will not be published. Required fields are marked *