ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ಕು ಸಿಬ್ಬಂದಿಗಳ ಮೇಲೆ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಸಾರಿಗೆ ಇಲಾಖೆ ಎದುರು ಪ್ರತಿಭಟನೆ ನಡೆಸಿದರು.
ಇಲಾಖೆಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಸೂರಿಟೆಂಡಂಟ್ ನಳಿನ, ಎಫ್ ಡಿ ಎ ಗಳಾದ ಕಸ್ತೂರಿ, ವಿಶ್ವನಾಥ್ ಹಾಗೂ ಕಂಪ್ಯೂಟರ್ ಆಪರೇಟರ್ ಗಳು ಲಂಚ ಸ್ವೀಕರಿಸುವ ವಿಡಿಯೋ ಬಹಿರಂಗಗೊಂಡಿದ್ದು, ಇದರಿಂದ ಸಾರಿಗೆ ಸಚಿವರ ಕ್ಷೇತ್ರದಲ್ಲಿಯೇ ಭ್ರಷ್ಠಾಚಾರ ತಾಂಡವವಾಡುತ್ತಿದೆ.ಆದರೆ ಹಿರಿಯ ಅಧಿಕಾರಿಗಳು ಮೌನ ವಹಿಸಿದ್ದಾರೆ. ಇದು ಇಲಾಖೆಯ ಹಿರಿಯ ಅಧಿಕಾರಿಗಳ ಮೇಲೆ ಅನುಮಾನ ಮೂಡಿಸಿದೆ. ಕೂಡಲೇ ನಾಲ್ಕು ಜನರ ಮೇಲೆ ಕಾನೂನಿನ ರೀತಿ ಕ್ರಮ ಜರುಗಿಸಬೇಕು ಇಲ್ಲದೆ ಹೋದರೆ ಸಾರಿಗೆ ಸಚಿವರ ವಿರುದ್ಧ ನಿಮ್ಮ ಕಚೇರಿ ಆವರಣದಲ್ಲಿ ಪ್ರತಿಭಟನೆಯನ್ನು ಮಾಡಲಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್ ಎಚ್ಚರಿಸಿದ್ದಾರೆ