ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ, ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2024-25ನೇ ಸಾಲಿಗೆ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಅದರ್ಶ ವಿದ್ಯಾಲಯದಲ್ಲಿ ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು, ಪ್ರವೇಶ ಪರೀಕ್ಷೆಗೆ ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 3 ರಿಂದ 13 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರವೇಶ ಪರೀಕ್ಷೆಗೆ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ). ಅಭಿವೃದ್ಧಿ, ಬಿ.ಇ.ಓ/ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ತಿಳಿಸಿದ್ದಾರೆ