ಬೆಂಗಳೂರು: ಕೋರೋನಾ ಕಾಲದಲ್ಲಿ ಮಕ್ಕಳ ಆರೋಗ್ಯ ಮುಖ್ಯ ಎಂಬ ತೀರ್ಮಾನಕ್ಕೆ ಬಂದಿರುವ ಕೇಂದ್ರ ಶಿಕ್ಷಣ ಇಲಾಖೆ ಸಿಬಿಎಸ್ ಸಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಿ ಆದೇಶ ಮಾಡಿದೆ. ರಾಜ್ಯ ಸರ್ಕಾರವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡುತ್ತಾ?
ಕೊರೋನಾ ಎರಡನೇ ಅಲೆ ಏರುತ್ತಿದ್ದು, ಮಕ್ಕಳ ಆರೋಗ್ಯ ಮುಖ್ಯವಾಗಿದೆ. ಮಕ್ಕಳ ಮೇಲೆ ಒತ್ತಡ ಹೆರುವುದು ಸರಿಯಲ್ಲ. ಎಂದು ಮೋದಿ ಹೇಳಿದ್ದಾರೆ. ಶಿಕ್ಷಣ ಸಚಿವರುಗಳ ಸಭೆಯನ್ನು ನಡೆಸಿದ ಪ್ರಧಾನಿ ಮೋದಿ ಈ ಮಾತು ಹೇಳಿದ್ದಾರೆ. ಕೋರೋನಾ ಸೋಂಕು ಪ್ರಕರಣ ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿದ್ದು ಜೂನ್ ಬಳಿಕ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸಂಯುಕ್ತವಾಣಿ