ಚಿತ್ರದುರ್ಗ:ಚಾಲಕ ತರಬೇತಿ ಕೇಂದ್ರದ ಎದುರಿನಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಆರು ಎಕರೆ ಜಮೀನು ನೀಡಲಾಗಿದೆ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಬಸ್ ಡಿಪೋದಲ್ಲೂ ಕೆಲಸ ಮಾಡುವ ಅವಕಾಶ ಸಿಗಬೇಕು ಎಂದು ಉದ್ದೇಶ ಹೊಂದಲಾಗಿದೆ ಎಂದು ಹೊಳಲ್ಕೆರೆ ಶಾಸಕ ಹಾಗೂ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು.
ಸಾರ್ವಜನಿಕರಿಗೆ ಅವಶ್ಯಕತೆ ಇರುವ ಕೆಲಸ ಮಾಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕುಡಿಯುವ ನೀರಿಗಾಗಿ ಸರ್ಕಾರವು ರೂ.319 ಕೋಟಿ ಅನುದಾನ ನೀಡಿದೆ. ಚಿಕ್ಕಜಾಜೂರು ಪಕ್ಕದ ಕೋಟಿಹಾಳ್ ಹತ್ತಿರ ರೂ.250 ಕೋಟಿ ವೆಚ್ಚವದಲ್ಲಿ 220 ಮೆ.ಗಾ ವಿದ್ಯುತ ಸರಬರಾಜು ಮಾಡುವ ಕೆಲಸ ನಡೆದಿದೆ ಎಂದರು. ತಾಲ್ಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ದಿನಗಳಲ್ಲಿ ನೀರು ತುಂಬಿಸುವ ಕೆಲಸವಾಗಲಿದೆ ಎಂದರು.
ಸಂಯುಕ್ತವಾಣಿ