ಚಿತ್ರದುರ್ಗ ಜಿಲ್ಲೆಯ ಡಿಸಿಸಿ ಬ್ಯಾಂಕ್ ಉತ್ತಮ ಆಡಳಿತ ದೃಷ್ಟಿಯಿಂದ ದೇಶದಲ್ಲೇ ಎರಡನೇ ಅತ್ಯುತ್ತಮ ಶಾಖೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಸುಧಾಕರ್ ತಿಳಿಸಿದ್ದಾರೆ.
ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಬ್ಯಾಂಕ್ ದೇಶದಲ್ಲೇ ಎರಡನೇ ಅತ್ಯುತ್ತಮ, ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ನ್ಯಾಶನಲ್ ಫೆಡರೇಶನ್ ಆಫ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿ ಪ್ರದಾನ ಮಾಡಿದೆ. ಈ ಮೂಲಕ ನಮ್ಮ ಸಹಕಾರಿ ಬ್ಯಾಂಕ್ 2021-22 ರ ಸಾಲಿನಲ್ಲಿ ದೇಶದಲ್ಲೇ ಎರಡನೇ ಸ್ಥಾನ ಗಳಿಸಿದೆ. ದೇಶದ 351 ಡಿಸಿಸಿ ಬ್ಯಾಂಕ್ ಗಳ ಪೈಕಿ ನಮ್ಮ ಬ್ಯಾಂಕ್ ಎರಡನೇಯದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಹಾಗೂ ಪಾರಿತೋಷಕ ಪ್ರದಾನ ಮಾಡಲಾಗಿದೆ. ಇದು ನಮ್ಮ ಜಿಲ್ಲೆ ಹೆಮ್ಮೆ ಪಡುವ ಸಂಗತಿ ಎಂದರು.