ಚಿತ್ರದುರ್ಗ: ರಾಜ್ಯ ಸಾರಿಗೆ ನೌಕರರು ನಡೆಸಿದ ಮುಷ್ಕರದಿಂದಾಗಿ ಸರ್ಕಾರದ ಬೊಕ್ಕಸಕ್ಕೆ 4.5 ಕೋಟಿ ರೂಪಾಯಿಗಳು ನಷ್ಟವಾಗಿದೆ?
ರಾಜ್ಯ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳು ರಾಜ್ಯದಾದ್ಯಂತ ಮುಷ್ಕರ ನಡೆಸಿದ್ದರು. ಮುಷ್ಕರದ ಬಿಸಿ ಎಷ್ಟಿತ್ತೆಂದರೆ ಸರ್ಕಾರಕ್ಕೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಕೊನೆಗೆ ಸರ್ಕಾರ ಮುಷ್ಕರಕ್ಕೆ ಮಣಿದು ನೌಕರರ ಹತ್ತು ಬೇಡಿಕೆಗಳಲ್ಲಿ ಒಂಭತ್ತು ಬೇಡಿಕೆಗಳನ್ನು ಈಡೇರಿಸಿ ನೌಕರರ ಮನವೊಲಿಸಿ ಮುಷ್ಕರ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ಸುನ್ನು ಕಂಡಿದೆ. ಆದರೆ ನಾಲ್ಕು ನಿಗಮಗಳಿಂದ ಒಟ್ಟು ನಾಲ್ಕು ದಿನಗಳಿಗೆ 4.5 ಕೋಟಿ ರೂಪಾಯಿಗಳು ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ.
ಸಂಯುಕ್ತವಾಣಿ