ಚಿತ್ರದುರ್ಗ: ರಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿವಿ ಸದಾನಂದಗೌಡ ದಿಢೀರ್ ನೆ ಕುಸಿದು ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಿನ್ನೆ ಶಿವ ಮೊಗ್ಗಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡು ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸಮಯದಲ್ಲಿ ನವೀನ್ ರಿಜೆನ್ಸಿ ಹೊಟೇಲ್ ಗೆ ಬಂದು ಕಾರ್ಯಕರ್ತರನ್ನು ಭೇಟಿಯಾಗಲು ಕಾರಿನಿಂದ ಇಳಿಯುತ್ತಿದ್ದಂತೆ ಮೂರ್ಛೆ ರೋಗ ಹಾಗೂ ಶುಗರ್ ಲೆವೆಲ್ ಕಡಿಮೆಯಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಸದಾನಂದಗೌಡರನ್ನು ಕೂಡಲೇ ಅಲ್ಲಿಯೇ ಇದ್ದ ಅಂಬ್ಯುಲೆನ್ಸ್ ನಲ್ಲಿ ಕಾರ್ಯಕರ್ತರು ಹಾಗೂ ಪೋಲಿಸರು ತಂದು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಗೌಡರಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದು, ಅವರುಗಾಗಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಪ್ಪಾರೆಡ್ಡಿ ಹೇಳಿದ್ದಾರೆ.
ಆರೋಗ್ಯದ ಬಗ್ಗೆ ರಾಜ್ಯಾಧ್ಯಕ್ಷ ಕಟೀಲ್, ಹಾಗೂ ರಾಜ್ಯ ಮುಖಂಡರು ವಿಚಾರಿಸಿದರು.
ಸ್ಥಳೀಯ ಮುಖಂಡರು ಹಾಗೂ ಶಾಸಕರುಗಳು , ಕಾರ್ಯಕರ್ತರು ಜಮಾಯಿಸಿದ್ದರು.
ಸಂಯುಕ್ತವಾಣಿ