ಹೊಸದುರ್ಗ ಪಟ್ಟಣದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಿಂದ ಜನರು ಅಸ್ವಸ್ಥ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಹೊಸದುರ್ಗಕ್ಕೆ ಧಾವಿಸಿ, ಆಸ್ಪತ್ರೆಗೆ ಭೇಟಿನೀಡಿ ಪರಿಶೀಲನೆ ನಡೆಸಿದರು, ಅಸ್ವಸ್ಥಗೊಂಡ ಸಾರ್ವಜನಿಕರ ಆರೋಗ್ಯ ವಿಚಾರಿಸಿದರು, ಅಲ್ಲದೆ ವೈದ್ಯರಿಂದ ಮಾಹಿತಿಯನ್ನೂ ಪಡೆದುಕೊಂಡರು. ಯಾರೂ ಕೂಡ ಭಯ, ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿರುತ್ತಾರೆ.
ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.