-ಜಿ.ಪಂ.ಸಿಇಓ ಎಂ.ಎಸ್.ದಿವಾಕರ
ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 1366 ಗ್ರಾಮಗಳ ಪೈಕಿ 1040 ಹಳ್ಳಿಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಮಾಡಲು ವಿಸ್ತøತ ಯೋಜನಾ ವರದಿ ಸಿದ್ಧಪಡಿಸಿ, ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಸ್.ದಿವಾಕರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಅವರು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ 2020 ರಿಂದ 2ನೇ ಹಂತದ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ.
ಈ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಸಮರ್ಪಕವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ನೈರ್ಮಲ್ಯದ ದೃಷ್ಟಿಯಿಂದ ಹಲವು ಸುರಕ್ಷಿತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ.ಶೌಚಾಲಯ ಇಲ್ಲದ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಡುವುದು ಕಟ್ಟಲು ಜಾಗವಿಲ್ಲದವರಿಗೆ ಸಮುದಾಯ ಶೌಚಾಲಯವನ್ನು ನಿರ್ಮಿಸುವುದು. ಘನ ಹಾಗೂ ದ್ರವ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದೆ.
ಮಲ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಮಾಡುವುದರಿಂದ ಪಿಟ್ನಿಂದ ಸಕ್ ಮಾಡುವಾಗ, ವಾಹನಕ್ಕೆ ತುಂಬುವಾಗ, ಸಾಗಾಣಿಕೆ ಮಾಡುವಾಗ, ಘಟಕಕ್ಕೆ ಕೊಂಡೊಯ್ದು ಮೇಲೆ ಅದನ್ನು ಸಂಸ್ಕರಿಸುವಾಗ ಹೀಗೆ ಯಾವ ಹಂತದಲ್ಲೂ ನೇರವಾಗಿ ಮನುಷ್ಯ ಅದನ್ನು ಮುಟ್ಟುವುದೇ ಇಲ್ಲ. ಇದರಿಂದ ಪೌರ ಕಾರ್ಮಿಕರು ಹಾನಿಕಾರಕವಲ್ಲದ ಸುರಕ್ಷಿತ ಪರಿಸರದಲ್ಲಿ ಕಾರ್ಯ ನಿರ್ವಹಿಸುವಂತೆ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಫೋಟೋ ವಿವರ: ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ
===========
ಡಿ.11ರಂದು ವಿದ್ಯುತ್ ವ್ಯತ್ಯಯ
********
ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.09:
ಚಿತ್ರದುರ್ಗ ನಗರ ಉಪವಿಭಾಗ ಘಟಕ-1ರ ವ್ಯಾಪ್ತಿಯಲ್ಲಿ ಬರುವ ಕೆಳಗೋಟೆ 11 ಕೆವಿ ಮಾರ್ಗದ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಂಬಗಳನ್ನು ಸ್ಥಳಾಂತರಿಸಲು ಮತ್ತು ತುರ್ತು ಕೆಲಸಗಳನ್ನು ನಿರ್ವಹಿಸಲು ಇದೇ ಡಿಸೆಂಬರ್ 11ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ನಿಲುಗಡೆಗೊಳಪಡುವ ಪ್ರದೇಶಗಳು: ತುರುವನೂರು ರಸ್ತೆಯ ಕಾನ್ವೆಂಟ್ ಸ್ಕೂಲ್ನಿಂದ ಆಸ್ಪತ್ರೆವರೆಗೆ ಮತ್ತು ಟೌನ್ ಕ್ಲಬ್ ಪ್ರದೇಶ, ನಗರಸಭೆ ರಸ್ತೆ, ಕೋರ್ಟ್ ರಸ್ತೆ, ವಾಸವಿ ಲ್ಯಾಬ್ ರಸ್ತೆ, ಬಾರ್ಲೈನ್, ಪೊಲೀಸ್ ಕ್ವಾಟ್ರಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.