ಮೀಸಲಾತಿ ನೀಡಿದ್ದು ಬಿಜೆಪಿ: ಜಯಪಾಲಯ್ಯ

ಜಿಲ್ಲಾ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದು ಪಡಿ ಮಾಡುತ್ತಾರೆ, ಮೀಸಲಾತಿ ತೆಗೆಯುತ್ತಾರೆ ಎಂದು ಹೇಳುವವರಿಗೆ ಬಿಜೆಪಿ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ತಕ್ಕ ಉತ್ತರವನ್ನು ನೀಡಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ ಹೇಳಿದರು.
ಅವರು ಎಸ್ಟಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ನವರು ಸುಳ್ಳು ಹೇಎಳಿಕೊಂಡು ಓಡಾಡುತ್ತಿದ್ದರು, ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಹೇಳುವ ನಿಟ್ಟಿನಲ್ಲಿ ಇದೇ 20 ರಂದು ಎಸ್ಟಿ ಸಮಾವೇಶವನ್ನು ಬಳ್ಳಾರಿಯಲ್ಲಿ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್ ಕಲ್ಬುರ್ಗಿ ವಿಭಾಗ ಸಂಘಟನಾ ಪ್ರಧಾನಕಾರ್ಯದರ್ಶಿಗಳು ಅರುಣ್ ಕಲ್ಬುರ್ಗಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯಪಾಲಯ್ಯನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ.ಟಿ. ರವಿಕುಮಾರ್ ಉಪಾಧ್ಯಕ್ಷರಾದ ಮಂಜಣ್ಣ ಮಂಡಲದ ಪ್ರಧಾನಿ ಕಾರ್ಯದರ್ಶಿಗಳಾದ ಪರಮೇಶ್ವರಪ್ಪ ಎಲ್ ಪರಮೇಶ್ವರಪ್ಪ ಪದಾಧಿಕಾರಿಗಳು, ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿ ಕೇಂದ್ರ ಹಾಗು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು…

 

 

Leave a Reply

Your email address will not be published. Required fields are marked *