ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ‌ ಸಹೋದರನ ಪುತ್ರ ಅಪಘಾತದಲ್ಲಿ ಸಾವು

ಕ್ರೈಂ

ಬೆಲಗೂರಿನಿಂದ ಶ್ರೀರಾಂಪುರಕ್ಕೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ‌ ತೆರಳುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

 

 

ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ತಾಲೂಕಿನ ಗರಗದ ಬಳಿ ಅಪಘಾತ ನಡೆದಿದ್ದು,ಮೃತ ವ್ಯಕ್ತಿಯನ್ನು ಪುನೀತ್ (32) ಎಂದು ಗುರುತಿಸಲಾಗಿದೆ. ಪುನೀತ್ ಹೊಸದುರ್ಗದ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರ ಸಹೋದರನ ಪುತ್ರ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *