ನಾಳಿನ ವಿಸರ್ಜನೆಯಲ್ಲಿ‌ ಶಾಂತಿ‌ ಕಾಪಾಡಿ

ಜಿಲ್ಲಾ ಸುದ್ದಿ

ಚಳ್ಳಕೆರೆ ಶಾಸಕರಾದ ಟಿ ರಘುಮೂರ್ತಿ ಅವರು ನಗರದ ಗಾಂಧಿನಗರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ 30ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದರು, ಗಾಂಧಿ ನಗರದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ವಿಸರ್ಜನೆಯು ನಾಳೆ ಇದ್ದು, ನಾಳೆಗೆ 26 ದಿನಗಳು ಕಳೆಯುತ್ತವೆ, ಶಾಂತಿಯುತವಾಗಿ‌ ಇಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಭಕ್ತರೆಲ್ಲರೂ ಕೂಡ ನಾಳಿನ ವಿಸರ್ಜನಾ ಕಾರ್ಯದಲ್ಲಿ ಶಾಂತಿಯುವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ, ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ, ಮುಖಂಡರುಗಳಾದ ಕೃಷ್ಣಮೂರ್ತಿ, ಚಂದ್ರು, ಅಂಜಿನಪ್ಪ, ಮುಖಂಡರು , ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು

 

 

Leave a Reply

Your email address will not be published. Required fields are marked *