ತೀವ್ರ ಹೃದಯಾಘಾತದಿಂದಾಗಿ ಆಹಾರ ಸಚಿವ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬೊಮ್ಮಾಯಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಅವರು ಡಾಲರ್ಸ್ ಕಾಲೋನಿಯ ಮನೆಯಲ್ಲಿ ಬಾತ್ ರೂಂಗೆ ಹೋದಾಗ ಎದೆ ನೋವು ಕಾಣಿಸಿಕೊಂಡಿದ್ದು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿ ವಶರಾಗಿದ್ದಾರೆ.
ಅವರ ಸಾವಿನಿಂದಾಗಿ ಒಬ್ಬ ಒಳ್ಳೆಯ ಸ್ನೇಹಿತ ನಿಷ್ಟಾವಂತ ಮುತ್ಸದ್ದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಹೇಳಿದ್ದಾರೆ. ಆಸ್ಪತ್ರೆಯ ಬಳಿಗೆ ಸಚಿವರು ಗಣ್ಯರು ಆಗಮಿಸುತ್ತಿದ್ದಾರೆ