ಕುಸಿದು ಬಿದ್ದ ಸೇತುವೆ ಸ್ಥಳಕ್ಕೆ ಭೇಟಿ‌ ನೀಡಿದ ಶಾಸಕಿ ಪೂರ್ಣಿಮಾ

ಜಿಲ್ಲಾ ಸುದ್ದಿ

ಹಿರಿಯೂರು ತಾಲೂಕಿನ ಸಮುದ್ರದಹಳ್ಳಿ ಮತ್ತು ಮ್ಯಾದನಹೊಳೆ ಗ್ರಾಮಗಳ ಮಧ್ಯೆ ಇರುವ ಸುವರ್ಣಮುಖಿ ನದಿಯ ಸೇತುವೆಯು ಕುಸಿದು ಬಿದ್ದಿದ್ದು, ಸದರಿ ಸ್ಥಳಕ್ಕೆ ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

 

 

ಸಾರ್ವಜನಿಕರಿಗೆ ಶೀಘ್ರದಲ್ಲೇ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಿ ಕೆ ಉಗ್ರಮೂರ್ತಿ, ವಿ ವಿ ಸಾಗರ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಮಂಜುನಾಥ, ಸದಸ್ಯರಾದ ಜಗದೀಶ್, ಕೃಷ್ಣಮೂರ್ತಿ, ಬಾಬು, ಪುಷ್ಪಾವತಿ, ತಿಪ್ಪೇಸ್ವಾಮಿ, ಮಹಾದೇವಮ್ಮ ಮುಖಂಡರಾದ ತಿಪ್ಪೇಸ್ವಾಮಿ, ಲೋಕೇಶ್, ತಿಮ್ಮರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *