UPDATE BREAKING
ನಾಳೆ ಶಿವಮೊಗ್ಗ ಭದ್ರಾವತಿ ಶಾಲಾ ಕಾಲೇಜ್ ಹಾಗೂ ಕುವೆಂಪು ವಿವಿಗೆ ರಜೆ
ಶಿವಮೊಗ್ಗ : ಸಾವರ್ಕರ್ ಫ್ಲಕ್ಸ್ ತೆರವುಗೊಳಿಸಿದ ಘಟನೆಯ ಹಿನ್ನೆಲೆಯಲ್ಲಿ ಇಬ್ಬರಿಗೆ ಚೂರಿ ಇರಿತವಾಗಿದ್ದು, ಅಮೀರ್ ಅಹಮದ್ ವೃತ್ತದಲ್ಲಿ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ವೀರ ಸಾವರ್ಕರ್ ಫ್ಲಕ್ಸ್ ಅಳವಡಿಸಲಾಗಿತ್ತು. ಆದರೆ ಕೆಲ ಕಿಡಿಗೇಡಿಗಳು ನುಗ್ಗಿ ಫ್ಲಕ್ಸ್ ನ್ನು ತೆರವುಗೊಳಿಸಿದ್ದರು. ಈ ವಿಷಯ ಗೊತ್ತಾಗುತ್ತಲೆ ಪೋಲಿಸರು ಬಂದು ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.
ಈ ಗಲಭೆಯಲ್ಲಿ ಇಬ್ಬರಿಗೆ ಚೂರಿ ಇರಿತವಾಗಿತ್ತು. ಇದರಿಂದ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು ಎಸ್ಪಿ ಲಕ್ಷ್ಮಿ ಪ್ರಸಾದ್ 2 ದಿನಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶಸಿದ್ದರು.ಇದೀಗ ಈ ಹಿನ್ನೆಲೆಯಲ್ಲಿ ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಆಗಸ್ಟ್ 16 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ವಿವಿಯ ಕುಲಪತಿ ವೀರಭದ್ರಪ್ಪ ಹೇಳಿದ್ದು, ಉಪನ್ಯಾಸಕರು ಹಾಗೂ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.