BIG BREAKING NEWS
ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೋಲಿಸರು ಬಂಧಿಸಿದ್ದು ಕಟ್ಟೆಚ್ಚರ ವಹಿಸಿದ್ದಾರೆ.
ಬಂಧಿತರನ್ನು ಜೆಸಿ ನಗರದ ನದೀಮ್ ಮತ್ತು ಬುದ್ದ ನಗರದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.
ನಿನ್ನೆ ಅಮೀರ್ ಅಹಮದ್ ಸರ್ಕಲ್ ನಲ್ಲಿ ಸಾವರ್ಕರ್ ಫ್ಲಕ್ಸ್ ತೆರವು ವಿಚಾರಕ್ಕೆ ಚೂರಿ ಇರಿತವಾಗಿ ಆಕ್ರೋಶ ಭುಗಿಲೆದ್ದು ಪ್ರತಿಭಟನೆಗೆ ಕಾರಣವಾಗಿತ್ತು. 144 ಸೆಕ್ಷನ್ ಕೂಡ ಜಾರಿಯಾಗಿದ್ದು, ಇಂದು ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ.
ಪ್ರೇಮ್ ಸಿಂಗ್ ನಗರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಸಂಜೆ ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆ ಬಳಿ ದುಷ್ಕರ್ಮಿಗಳ ತಂಡ ಪ್ರೇಮ್ ಸಿಂಗ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಗಾಯಗೊಂಡ ಪ್ರೇಮ್ ಸಿಂಗ್ ನನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಡರಾತ್ರಿ ಇಬ್ಬರನ್ನು ಬಂಧಿಸಿದ್ದಾರೆ.
ಫ್ಲೆಕ್ಸ್ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ 3 ದಿನ, ಭದ್ರಾವತಿಯಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಂದೋಬಸ್ತ್ ಉಸ್ತುವಾರಿಯನ್ನು ಎಡಿಜಿಪಿ ಅಲೋಕ್ ಕುಮಾರ್ ವಹಿಸಿದ್ದಾರೆ.