ಹಿಂದುಳಿದವರ ಏಳಿಗೆಗಾಗಿ ಕೆಲಸ ಮಾಡುತ್ತೇವೆ: ಡಿಸಿ ದಿವ್ಯ ಪ್ರಭು

ಜಿಲ್ಲಾ ಸುದ್ದಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡುತ್ತೇವೆ. ಆರ್ಥಿಕ ಮತ್ತು ಸಮಾಜಿಕವಾಗಿ ಜಿಲ್ಲೆಯ ಜನರು ಹಿಂದುಳಿದಿದ್ದು, ಅವರ ಏಳಿಗೆಗಾಗಿ ನಾನು ನನ್ನ ಅಧಿಕಾರಿಗಳು ಕೆಲಸ ಮಾಡಲು ಸಿದ್ದರಿದ್ದೇವೆ ಎಲ್ಲರ ಸಹಕಾರ ಪಡೆದು ಕೆಲಸವನ್ನು ಮಾಡುತ್ತೇವೆ ಎಂದು ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ನಾಯಕನಹಟ್ಟಿಯಲ್ಲಿ‌ ಇಂದು ಮಾಧ್ಯಮಗಳಿಗೆ ಮಾತನಾಡಿದರು.
ಇದಕ್ಕೂ ಮುನ್ನ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಚಳ್ಳಕೆರೆ ತಾಲೂಕಿನನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಹೊರ ಮತ್ತು ಒಳ‌ಮಠಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು, ಅವರು, ಚಿತ್ರದುರ್ಗ ಜಿಲ್ಲೆಯೂ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು, ಎಸ್ಸಿ ಎಸ್ಟಿ ಜನಾಂಗದವರೇ ಹೆಚ್ಚಿದ್ದಾರೆ ಅವರ ಮನೆ ಬಾಗಿಲಿಗೆ ಸರ್ಕಾರಗಳ‌ ಯೋಜನೆಗಳನ್ನು ತಲುಪಿಸಲು ಸಿದ್ದರಿದ್ದೇವೆ ಎಂದು ಹೇಳಿದರು. ಈ ಸಮಯದಲ್ಲಿ ಎಡಿಸಿ ಬಾಲಕೃಷ್ಣ ಹಾಗೂ ಚಳ್ಳಕೆರೆ ತಹಶೀಲ್ದಾರ್ ರಘು ಮೂರ್ತಿ ಹಾಗೂ ಇತರೆ ಅಧಿಕಾರಿಗಳು ಇದ್ದರು

 

 

Leave a Reply

Your email address will not be published. Required fields are marked *