ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು : ಶಾಸಕ ರಘುಮೂರ್ತಿ

ಜಿಲ್ಲಾ ಸುದ್ದಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಯವರು ಚಳ್ಳಕೆರೆ ನಗರದ ನಗರಸಭೆ ಆವರಣದಲ್ಲಿ ನಡೆದ ನಗರಸಭೆ ವತಿಯಿಂದ ಖರೀದಿಸಿದ ನೂತನ ಮುಕ್ತಿ ವಾಹನದ ಪೂಜೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

 

 

ಪ್ರತಿಯೊಬ್ಬ ಮನುಷ್ಯನಿಗೂ ಕೂಡ ಹುಟ್ಟುವಾಗಲೇ ತಾನು ಹೋಗುವ ದಿನವನ್ನು ಭಗವಂತ ಬರೆದು ಬಿಟ್ಟಿರುತ್ತಾನೆ. ಅದರಂತೆಯೇ ಎಲ್ಲವೂ ನಡೆಯುತ್ತದೆ. ಹುಟ್ಟಿದ ಮೇಲೆ ಪ್ರತಿಯೊಬ್ಬರೂ ಕೂಡ ಎನನ್ನಾದರೂ ಸಾಧಿಸಬೇಕು.‌ಇದರಿಂದ ನಮ್ಮ ಜೀವನ ಹುಟ್ಟು ಸಾರ್ಥಕವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪೌರಾಯುಕ್ತರದ ಚಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಆರ್ ಪ್ರಸನ್ ಕುಮಾರ್, ಸದಸ್ಯರುಗಳಾದ ಶ್ರೀಮತಿ ಸುಮಾ ಭರಮಯ್ಯ , ಶ್ರೀಮತಿ ಸುಜಾತ ಪ್ರಹ್ಲಾದ್, ಶ್ರೀಮತಿ ಜೈ ತುಂಬಿ, ಶ್ರೀಮತಿ ಕವಿತಾ ಬೋರಯ್ಯ, ಮಲ್ಲಿಕಾರ್ಜುನ, ಪ್ರಕಾಶ್, ವೀರಭದ್ರಯ್ಯ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ವೀರೇಶ್, ಮುಖಂಡರುಗಳಾದ ಕೃಷ್ಣಮೂರ್ತಿ, ಪ್ರಹ್ಲಾದ್ ,ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಖಾದರ್ ಮುಖಂಡರು, ಕಾರ್ಯಕರ್ತರು ಮತ್ತು ನಗರಸಭೆಯ ಸಿಬ್ಬಂದಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *