ಕ್ಲೋರಿನ್ ಸೋರಿಕೆ ಸ್ಥಳಕ್ಕೆ ದೌಡಾಯಿಸಿದ ಡಿಸಿ ಟಿ. ವೆಂಕಟೇಶ್

ರಾಜ್ಯ

ಕುಡಿಯುವ ನೀರಿನ ಶುದ್ಧ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ, ಸುಮಾರು 50 ಜನರು ಉಸಿರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ಹೊಸದುರ್ಗದಲ್ಲಿ ನಡೆದಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಸುಮಾರು 20 ವರ್ಷಗಳ ಹಳೆಯದಾದ ಶುದ್ದ ಕುಡಿಯುವ ನೀರಿನ ಘಟಕದಲ್ಲಿರುವ ಕ್ಲೋರಿನ್ ತುಂಬಿರುವ ಸಿಲಿಂಡರ್ ಗಳು ಸೋರಿಕೆಯಾಗಿದ್ದರಿಂದ ಸುಮುತ್ತಲಿನ ಮನೆಗಳ ಸುಮಾರು 50 ಜನರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು. ಆಸ್ಪತ್ರೆಗೆ ದಾಖಲಾಗಿದ್ದವರನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ ಮಾಡಿ‌ ಅವರ ಆರೋಗ್ಯ ವಿಚಾರಿಸಿದ್ದಾರೆ. ಈಗಾಗಲೇ 50 ಜನರಿಗೆ ಚಿಕಿತ್ಸೆ ನೀಡಿದ್ದು, ಅವರೆಲ್ಲರೂ ಚೇತರಿಸಿಕೊಂಡು ಮನೆಗಳಿಗೆ ತೆರಳಿದ್ದು, ಇನ್ನು ನಾಲ್ಕೈದು ಜನರು ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ಬಿ‌ ಟಿ‌ ಕುಮಾರಸ್ವಾಮಿ, ಇತರರು ಇದ್ದರು.

 

 

Leave a Reply

Your email address will not be published. Required fields are marked *