ಯುವ ಕಾಂಗ್ರೆಸ ಸದಸ್ಯತ್ವ ಹೆಚ್ಚಿಸಿ ಪಕ್ಷ ಬಲಪಡಿಸಿ: ಸುರಭಿ ದ್ವಿವೇದಿ

ಜಿಲ್ಲಾ ಸುದ್ದಿ ರಾಜಕೀಯ

 

  1. ಯುವ ಕಾಂಗ್ರೆಸ ಸದಸ್ಯತ್ವ ಹೆಚ್ಚಿಸಿ ಪಕ್ಷ ಬಲಪಡಿಸಿ: ಸುರಭಿ ದ್ವಿವೇದಿ

ಚಿತ್ರದುರ್ಗ,ನಂ೪(ಸಂವಾ)- ಕಾಂಗ್ರೆಸ್ ಸದಸ್ಯತ್ವವನ್ನು ಹೆಚ್ಚು ಹೆಚ್ಚು ಮಾಡಬೇಕು. ಯುವಕರು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಮಹತ್ವ ನೀಡಬೇಕು ಇದರಿಂದ ಮುಂದಿನ ದಿನಗಳಲ್ಲಿ ಪಕ್ಷ ಸದೃಢವಾಗಲು ಸಹಕಾರಿಯಾಗುತ್ತದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ಯಾಗಿರುವ ಸುರಭಿ ದ್ವಿವೇದಿ ಕಿವಿ ಮಾತು ಹೇಳಿದರು.

 

 

 Chitradurga Enhance congress youth membership Chitradurga Enhance youth congress membership
ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ‌ಮಾತನಾಡಿ, ಕಾಂಗ್ರೆಸ್ ಪಕ್ಷ ಇತಿಹಾಸವಿರುವ ಪಕ್ಷವಾಗಿದೆ. ಇದರ ಸಾಧನೆಯ ಬಗ್ಗೆ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿರುವ ಅಭಿವೃದ್ದಿ ಕೆಲಸಗಳ ಬಗ್ಗೆ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕು.ಜೊತೆಗೆ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಂತ ಕೆಲಸವನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಪಕ್ಷದ ಯುವ ಸದಸ್ಯರ ಸಂಖ್ಯೆ ಹೆಚ್ಚಾಗುವಂತೆ ಮಾಡುವ ಮೂಲಕ ಪಕ್ಷವನ್ನು ರಾಜ್ಯದಲ್ಲಿ ಹಾಗು ಚಿತ್ರದುರ್ಗ ಜಿಲ್ಲೆಯಲ್ಲಿ ಸದೃಢವನ್ನಾಗಿ ಮಾಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೇಳಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಕೆ ತಾಜ್ ಪೀರ್, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಧುಪಾಲೇಗೌಡ ಕಾರ್ಯದರ್ಶಿ ಖುದ್ದೂಸ್, ಇನ್ನು ಮುಂತಾದವರು ಭಾಗವಹಿಸಿದ್ದರು.

ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Leave a Reply

Your email address will not be published. Required fields are marked *