ನಗರದಲ್ಲಿರುವ  ಸಿಸಿ ಕ್ಯಾಮೆರಾ ಸರಿಪಡಿಸಿ: ಕೆಸಿ ವೀರೇಂದ್ರ ಪಪ್ಪಿ

ರಾಜ್ಯ

ನಗರದಲ್ಲಿರುವ  ಸಿಸಿ ಕ್ಯಾಮೆರಾ ಸರಿಪಡಿಸಿ: ಕೆಸಿ ವೀರೇಂದ್ರ ಪಪ್ಪಿ

 

 

 

ಚಿತ್ರದುರ್ಗ ನಗರದಲ್ಲಿರುವ ಸಿಸಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಸಿ.ಸಿ.ಕ್ಯಾಮೆರಾಗಳನ್ನು ಕಳೆದ 4-5 ವರ್ಷದ ಹಿಂದೆ ಹಾಕಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲ. ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದಲ್ಲಿರುವ ಸಿ.ಸಿ.ಕ್ಯಾಮೆರಾಗಳನ್ನು ಸರಿಪಡಿಸಿ, ನಗರಸಭೆ ವತಿಯಿಂದಲೇ ನಿರ್ವಹಣೆ ಮಾಡುತ್ತೇವೆ ಎಂದು ರೇಣುಕಾ ಸಭೆಗೆ ಮಾಹಿತಿ ನೀಡಿದರು.

ಹೊಸ ಮದ್ಯದಂಗಡಿಗೆ ಅನುಮತಿ ಬೇಡ :

ಚಿತ್ರದುರ್ಗ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ.  ಕೂಡಲೆ ಇದರ ಬಗ್ಗೆ ಅಬಕಾರ ಇಲಾಖೆ ಕ್ರಮ ಕೈಗೊಂಡು, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಬಂದ್ ಮಾಡಿಸಬೇಕು, ಅಲ್ಲದೆ ಹೊಸದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಿಯೂ ಖಾಸಗಿ ಅಥವಾ ಎಂಎಸ್‍ಐಎಲ್ ಮದ್ಯದಂಗಡಿಗೆ ಹಾಗೂ ಸಿಎಲ್-7 ಗೂ ಕೂಡ ಅನುಮತಿ ನೀಡುವುದು ಬೇಡ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಬಕಾರ ಇಲಾಖೆ ಉಪ ಆಯುಕ್ತರಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *