ಮುಂದೆ ಮಲಗಿರುವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ,ಹೊಳಲ್ಕೆರೆಯ ಕಂಬದ ದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೃಷ್ಣಪ್ಪ ಇಂದು ಗುರಿಸಲಾಗಿದೆ ಕೊಲೆಗೆ ಅನೈತಿಕ ಸಂಬಂಧ ಕಾರಣವೆಂದು ಹೇಳಲಾಗುತ್ತಿದ್ದು, ಕೊಲೆ ಮಾಡಿರುವ ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗದ ಡಿ ವೈಎಸ್ ಪಿ ದಿನಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊಳಲ್ಕೆರೆಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.