ಹೊಳಲ್ಕೆರೆ : ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿ ಮಡಿದ ನಮ್ಮ ಹಿರಿಯರ ಸೇವೆ, ತ್ಯಾಗ, ಬಲಿದಾನ ಅವಿಸ್ಮರಣೀಯವಾದುದು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಎಪ್ಪತ್ತೆಂಟನೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪಟ್ಟಣದ ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಗಾಂಧಿಜಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ದೇಶವನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಬ್ರಿಟೀಷರಿಂದ ಹಿಂಸೆ, ಸಾವು, ನೋವುಗಳನ್ನು ಅನುಭವಿಸಿದ ಮಹನೀಯರು ಸ್ವಾಂತ್ರ್ಯೋತ್ಸವದ ಮೂಲಕ ಪ್ರಜಾಪ್ರಭುತ್ವವನ್ನು ತಂದು ಕೊಟ್ಟಿರುವುದರಿಂದ ದೇಶದ 140 ಕೋಟಿ ಜನ ಸ್ವಾಂತ್ರ್ಯದ ಸವಿಯನ್ನು ಅನುಭವಿಸುವಂತಾಗಿದೆ. ಸ್ವಾರ್ಥವನ್ನು ಬದಿಗಿಟ್ಟು ಸಿಕ್ಕಿರುವ ಅಧಿಕಾರವನ್ನು ಯಾರು ಸಾರ್ವಜನಿಕ ಸೇವೆಗೆ ಮೀಸಲಿಡುತ್ತಾರೋ ಅವರುಗಳೆ ನಿಜವಾಗಿಯೂ ದೇಶಭಕ್ತರು. ದೇಶದ ಪ್ರಧಾನಿ ನರೇಂದ್ರಮೋದಿ ಅಧಿಕಾರವನ್ನು ಸೇವೆ ಎಂದು ತಿಳಿದು ಹಗಲಿರುಳು ದೇಶ ಸೇವೆಯಲ್ಲಿ ತೊಡಗಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಆಡಳಿತ ಪ್ರತಿಪಕ್ಷ ಎನ್ನುವ ಮನಸ್ಥಿತಿಯನ್ನು ಬಿಟ್ಟು ಅಭಿವೃದ್ದಿಗೆ ಎಲ್ಲರೂ ಕೈಜೋಡಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ಸಂವಿಧಾನ ನೀಡಿರುವುದರಿಂದ ಪ್ರಜಾಪ್ರುಭತ್ವ ವ್ಯವಸ್ಥೆಯಡಿ ಎಲ್ಲಾ ಜಾತಿ ಧರ್ಮದವರನ್ನು ವಿಶ್ವಾಸಕ್ಕೆ ತಗೆದುಕೊಂಡು ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ರಾಜಕಾರಣಿಗಳ ಕರ್ತವ್ಯ. ಮಕ್ಕಳ ಪಾಲನೆ, ಲಾಲನೆ, ಪೋಷಣೆ ಪ್ರತಿಯೊಬ್ಬರ ಜವಾಬ್ದಾರಿ. ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮುಂದಿನ ದಿನಗಳಲ್ಲಿ ನೀಡಲಿದೆ. ಪಿ.ಯು.ಕಾಲೇಜು, ಪದವಿಪೂರ್ವ ಕಾಲೇಜು, ಒಳಾಂಗಣ ಕ್ರೀಡಾಂಗಣ, ಈಜುಕೊಳ, ಔಟ್ಡೋರ್ ಸ್ಟೇಡಿಯಂಗಳನ್ನು ತಾಲ್ಲೂಕಿನಲ್ಲಿ ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳಿಗೆ ತೊಂದರೆಯಾಗಬಾರದೆಂದು ಯಾವುದೇ ಫಲಾಪೇಕ್ಷೆಯಿಲ್ಲದೆ ಸ್ವಂತ ಖರ್ಚಿನಿಂದ ಬಸ್ಗಳ ಸಂಚಾರ ಆರಂಭಿಸಲಾಗಿದೆ. ಶಿಕ್ಷಕರುಗಳ ಸೇವೆ ಅತ್ಯಮೂಲ್ಯವಾದುದು. ಮಕ್ಕಳಿಗೆ ಪಾಠ ಹೇಳಿಕೊಡುವುದರ ಜೊತೆ ಸಮಾಜ ತಿದ್ದುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ತಿಳಿಸಿದರು.
ಗಂಗಾಧರ್, ರುದ್ರಪ್ಪ, ಮುರುಗೇಶ್, ಅಬ್ದುಲ್ಕಲಾಂ, ದೇವೇಂದ್ರಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ಅಶೋಕ್, ಮಲ್ಲಿಕಾರ್ಜುನ್, ಗಂಗಣ್ಣ,
ಪುರುಷೋತ್ತಮ್, ಕಿರಣ್ಕುಮಾರ್, ತಹಶೀಲ್ದಾರ್ ಶ್ರೀಮತಿ ಬೀಬಿ ಫಾತಿಮ, ಪಿ.ಯು.ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ್ದರು.
ಡಾ.ಉಮಾಪತಿ ಹಾಗೂ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಗುರುತಿಸಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು